Wednesday 30 April, 2008

ಮಿಂಚಾಗಿ ನೀನು ಬರಲು...


ಮಿಂಚಾಗಿ ನೀನು ಬರಲು ನಿಂತಲ್ಲಿಯೇ ಮಳೆಗಾಲ
ಬೆಚ್ಚಗೆ ನೀ ಜೊತೆಗಿರಲು ಕೂತಲ್ಲಿಯೇ ಚಳಿಗಾಲ
ವಿರಹದ ಬೇಗೆ ಸುಡಲು ಎದೆಯಲಿ ಬೇಸಿಗೆಕಾಲ
ಇನ್ನೆಲ್ಲಿ ನನಗೆ ಉಳಿಗಾಲ.

ನಾ ನಿನ್ನ ಕನಸಿಗೆ ಚಂದಾದಾರನು
ಚಂದಾ ಬಾಕಿ ನೀಡಲು ಬಂದೇ ಬರುವೆನು
ನಾ ನೇರ ಹೃದಯದ ವರದಿಗಾರನು
ನಿನ್ನ ಕಂಡ ಕ್ಷಣದಲೇ ಮಾತೇ ಮರೆವೆನು
ಕ್ಷಮಿಸು ನೀ ಕಿನ್ನರಿ ನುಡಿಸಲೇ ನಿನ್ನನು
ಹೇಳಿ ಕೇಳಿ ಮೊದಲೆ ಚೂರು ಪಾಪಿ ನಾನು.

ನಿನ್ನ ಮನದ ಕವಿತೆ ಸಾಲ ಪಡೆವ ನಾನು ಸಾಲಗಾರ
ಕನ್ನ ಕೊರೆದು ದೋಚಿಕೊಂಡ ನೆನಪುಗಳಿಗೆ ಪಾಲುದಾರ
ನನ್ನ ಈ ವೇದನೆ ನಿನಗೆ ನಾ ನೀಡೆನು
ಹೇಳಿ ಕೇಳಿ ಮೊದಲೆ ಚೂರು ಕಳ್ಳ ನಾನು.

ಚಿತ್ರ: ಗಾಳಿ ಪಟ
ಬರೆದವರು: ಜಯಂತ ಕಾಯ್ಕಿಣಿ

No comments: